- February 16, 2022
ಕಿರಣ್ ರಾಜ್ ಒಳ್ಳೆಯ ಕೆಲಸ ನೋಡಿ ಮಂಗಳಮುಖಿಯರು ಹೇಳಿದ್ದೇನು ಗೊತ್ತಾ?

ನಟನೆಯ ಜೊತೆಗೆ ಸಾಮಾಜಿಕ ಸೇವೆಗಳಿಂದ ಮೆಚ್ಚುಗೆ ಗಳಿಸಿರುವ ನಟ ಕಿರಣ್ ರಾಜ್ ಈಗ ಮಂಗಳಮುಖಿಯರಿಗೆ ಸಹಾಯ ಮಾಡಿದ್ದಾರೆ.
ದುಡಿದದ್ದನ್ನು ನಿತ್ಯ ಜೀವನಕ್ಕೆ ಎಷ್ಟು ಬೇಕೋ ಅಷ್ಟು ಉಳಿಸಿ ಉಳಿದ ಹಣವನ್ನು ಸಮಾಜಕ್ಕೆ ನೀಡುವ ಗುಣವಿರಬೇಕು ಎನ್ನುವ ಸೇವಾ ಮನೋಭಾವ ಹೊಂದಿರುವ ಕಿರಣ್ ರಾಜ್ ಕೊರೋನಾದಿಂದಾಗಿ ಜನರು ಜೀವನ ನಡೆಸಲು ಕಷ್ಟದಲ್ಲಿದ್ದಾಗ ಅವರಿಗೂ ಸಹಾಯ ಮಾಡಿ ಮನಾವೀಯತೆ ಮೆರೆದಿದ್ದಾರೆ.

ತಮ್ಮ ಕಿರಣ್ ರಾಜ್ ಫೌಂಡೇಶನ್ ಮೂಲಕ ಕೊರೋನಾ ಸಂಕಷ್ಟ ಸಮಯದಲ್ಲಿ ಸಾಕಷ್ಟು ಜನರಿಗೆ ಆಹಾರದ ಕಿಟ್ ಗಳನ್ನು ವಿತರಿಸಿದ್ದರು. ಹೊರ ರಾಜ್ಯಗಳಿಂದ ಹಾಗೂ ಊರುಗಳಿಂದ ಬಂದು ಫುಟ್ ಪಾತ್ ಮೇಲೆ ಆಶ್ರಯ ಪಡೆದವರಿಗೂ ಬೆಡ್ ಶೀಟ್ ಹಂಚಿದ್ದರು.

ಮಂಗಳಮುಖಿಯರಿಗೂ ಸಹಾಯಹಸ್ತ ಚಾಚಿರುವ ಕಿರಣ್ ರಾಜ್ “ಮಂಗಳಮುಖಿಯರಿಗೆ ಬೆಚ್ಚಗಿನ ಹೊದಿಕೆಗಳನ್ನು ನೀಡಲಾಗಿದೆ. ಹಬ್ಬ ಹರಿದಿನಗಳಲ್ಲಿ ಅವರಿಗೆಲ್ಲಾ ಬಾಳೆಎಲೆಯಲ್ಲಿ ಊಟ ಹಾಕಿಸಿ ನಾವು ಅವರೊಡನೆ ಊಟ ಮಾಡಿದ್ದೇನೆ. ಇನ್ನು ಅವರು ಯಾವುದರಲ್ಲಿಯೂ ನಮ್ಮಿಂದ ಕಡಿಮೆ ಇಲ್ಲ. ಸಮಾಜ ಅವರನ್ನು ನೋಡುವ ರೀತಿ ಬದಲಾಗಬೇಕು”ಎಂದಿದ್ದಾರೆ ಕಿರಣ್ ರಾಜ್.

“ದೇವರು ಎಲ್ಲ ಕಡೆ ಇರಲು ಸಾಧ್ಯವಾಗುವುದಿಲ್ಲ. ಬಹುಶಃ ಅದೇ ಕಾರಣದಿಂದ ಕಿರಣ್ ರಾಜ್ ರಂತಹ ಒಳ್ಳೆಯ ಮನುಷ್ಯರನ್ನು ಭೂಮಿಗೆ ಕಳುಹಿಸಿರುತ್ತಾನೆ. ಅವರಿಗೆ ಒಳ್ಳೆಯದಾಗಲಿ “ಎಂದು ಮಂಗಳಮುಖಿಯರು ಹಾರೈಸಿದ್ದಾರೆ. ಕರ್ನಾಟಕ ಮಾತ್ರವಲ್ಲದೆ ಮುಂಬೈನಲ್ಲಿಯೂ ಕಿರಣ್ ರಾಜ್ ಅವರ ಸಾಮಾಜಿಕ ಸೇವೆಗಳು ನಡೆದಿವೆ.

- ದಳಪತಿ ವಿಜಯ್ ಕೊನೆಯ ಸಿನಿಮಾ ‘ಜನನಾಯಕನ್’ – ಪೊಂಗಲ್ 2026 ರಿಲೀಸ್!
- ವರಮಹಾಲಕ್ಷ್ಮೀಗೆ ಜೇಮ್ಸ್ ಡೈರೆಕ್ಟರ್ ಹೊಸ ಸಿನಿಮಾ ಅನೌನ್ಸ್…’ಬರ್ಮ’ ಚಿತ್ರಕ್ಕೆ ಗಟ್ಟಿಮೇಳ ರಕ್ಷ್ ನಾಯಕ
- ಎಸ್ತರ್ ನರೋನ ಈಗ ನಿರ್ದೇಶಕಿ….’ದಿ ವೆಕೆಂಟ್ ಹೌಸ್’ ಮೂಲಕ ಹೊಸ ಹೆಜ್ಜೆ ಇಟ್ಟ ಮಂಗಳೂರು ಸುಂದರಿ.
- ಮತ್ತೆ ಒಂದಾದ ’ಬಡವ ರಾಸ್ಕಲ್’ ತಂಡ.. ಡಾಲಿ ಧನಂಜಯ್ ಹುಟ್ಟುಹಬ್ಬಕ್ಕೆ ’ಅಣ್ಣ From Mexico’ ಸಿನಿಮಾ ಅನೌನ್ಸ್*
- ಯಶ್ ಅಭಿಮಾನಿಗಳಿಗೆ ಕ್ಷಮೆ ಕೇಳಿದ ತಮಿಳು ನಟ ಜೈ ಆಕಾಶ್
- ಸ್ಲೀಪ್ ವೆಲ್ ಕಿರುಚಿತ್ರಕ್ಕೆ ಸಿಕ್ತು ಪ್ರಶಸ್ತಿಗಳ ಸುರಿಮಳೆ.
- ಸಿನಿಮಾಟೋಗ್ರಾಫರ್ ಮಸೂದೆ ಅಂಗೀಕಾರ, ಪೈರಸಿಗೆ ಬಿತ್ತು ಬ್ರೇಕ್, ನಿಯಮ ಉಲ್ಲಂಘಿಸಿದರೆ ಜೈಲೂಟ ಗ್ಯಾರಂಟಿ.
- ವಾ…ವಾ…ವಾ…ವಾಮನ ಹಾಡು ಬಂತು….ಶೋಕ್ದಾರ್ ಧನ್ವೀರ್ ಮಾಸ್ ಎಂಟ್ರಿ
- ಡೈರೆಕ್ಟರ್ ಕ್ಯಾಪ್ ತೊಟ್ಟ ಚುಟು ಚುಟು ಕೋರಿಯೋಗ್ರಫರ್..ಹೀರೋ ಆದ ಭೂಷಣ್ ಮಾಸ್ಟರ್ ಈಗ ಡೈರೆಕ್ಟರ್…
- ‘ಹಾಸ್ಟೆಲ್ ಹುಡುಗರಿಗೆ’ ಜಯ..ಕೇಸ್ ಗೆದ್ದ ಖುಷಿಯಲ್ಲಿ ಬಾಯ್ಸ್ ಸಂಭ್ರಮ..ರಮ್ಯಾ ಲೇಡಿ ಸೂಪರ್ ಸ್ಟಾರ್ ಎಂದ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಡೈರೆಕ್ಟರ್.